ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

*ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಗೆದ್ದ ಪುಣಚ ಗ್ರಾಮದ ಹೆಮ್ಮೆಯ ಶ್ರೀದೇವಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಂಭ್ರಮಾಚರಣೆ* *ವಿದ್ಯಾಭಾರತಿ, ಇದರ ವತಿಯಿಂದ ಮಧ್ಯ ಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ ಮಕ್ಕಳು ದಕ್ಷಿಣ ಮಧ್ಯಕ್ಷೇತ್ರೀಯದಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದು ದೆಹಲಿಯಲ್ಲಿ ನಡೆಯಲಿರುವ SGFI* *ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಪ್ರಯುಕ್ತ ದಿನಾಂಕ 2/11/2023 ಗುರುವಾರ ಸಂಜೆ 5:30 ಗಂಟೆಗೆ ಪರಿಯಾಲ್ತಡ್ಕ ಪೇಟೆಯಲ್ಲಿ ಸಂಭ್ರಮಾಚರಣೆ ನಡೆಯಲಿದೆ.* *ಈ ಕಾರ್ಯಕ್ರಮದಲ್ಲಿ ತಾವು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಯಶಸ್ವಿಗೊಳಿಸಬೇಕಾಗಿ ಹಾಗೂ ಮಕ್ಕಳಲ್ಲಿ ಸ್ಪೂರ್ತಿ ತುಂಬಬೇಕಾಗಿ ವಿನಂತಿ* ವಿಶೇಷ ಆಕರ್ಷಣೆ : *ಶ್ರೀ ಮಹಿಷಮರ್ದಿನಿ ಸಿಂಗಾರಿ ಮೇಳ ಪುಣಚ ಇವರಿಂದ ಚೆಂಡೆ*