ಶ್ರೀದೇವಿ ಶಿಶುಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀದೇವಿ ಶಿಶುಮಂದಿರ ದೇವಿನಗರ ಪುಣಚ, ಇದರ ವತಿಯಿಂದ ದಿನಾಂಕ 26-08-2024 ನೇ ಸೋಮವಾರದಂದು ಶ್ರೀದೇವಿ ವಿದ್ಯಾಕೇಂದ್ರದ ನಮೋಭಾರತಿ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಹರೀಶ್ ಪೂಜಾರಿ ಅಧ್ಯಕ್ಷರು, ರೋಟರಿ ಕ್ಲಬ್ ವಿಟ್ಲ, ಇವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿಯವರು ಶ್ರೀಕೃಷ್ಣನ ಆದರ್ಶಗಳನ್ನು ಉಲ್ಲೇಖಿಸಿ, ಸಭೆಗೆ ಆಶೀರ್ವಚನ ನೀಡಿದರು ಹಾಗೂ ಕೃಷ್ಣ-ರಾಧೆಯರ ವೇಷಭೂಷಣಗಳಿಂದ ಕಂಗೊಳಿಸುತ್ತಿದ್ದ ಮಕ್ಕಳನ್ನು ಕಂಡು ಕಲಿಯುಗದಲ್ಲಿ ದ್ವಾಪರಯುಗದ ದರ್ಶನವಾಯಿತೆಂದು ಹರ್ಷ ವ್ಯಕ್ತಪಡಿಸಿದರು. ಶ್ರೀದೇವಿ ಶಿಶುಮಂದಿರದ ವ್ಯವಸ್ಥಾಪಕಿ ಶ್ರೀಮತಿ ಗಂಗಮ್ಮ ಮಾತಾಜಿ ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಜನಿ ಮಾತಾಜಿ ಧನ್ಯವಾದ ಸಮರ್ಪಿಸಿದರು. ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ವೇತ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಶಿಶುಮಂದಿರದ ಮಾತಾಜಿಯರಾದ ಶ್ರೀಮತಿ ನಳಿನಾಕ್ಷಿ ಮತ್ತು ಶ್ರೀಮತಿ ಲೀಲಾವತಿ ಕಾರ್ಯಕ್ರಮ ಸಂಯೋಜಿಸಿದರು. ಶಿಶುಮಂದಿರದ ಪುಟಾಣಿಗಳು ರಾಧಾ-ಕೃಷ್ಣ ವೇಷ ತೊಟ್ಟು ಸಂಭ್ರಮಿಸಿದರು . ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕೃಷ್ಣ-ಸುಧಾಮ ಕಿರು ನಾಟಕ ಪ್ರಸ್ತುತ ಪಡಿಸಿದರು. ಕಾರ್ಯಕ್ರಮದಲ್ಲಿ ಶ್ರೀದೇವಿ ವಿದ್ಯಾಕೇಂದ್ರದ ಹಾಗೂ ಶ್ರೀದೇವಿ ಶಿಶುಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು , ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.